ಮಂತ್ರಿಗಳು ಆಗೀಗ ಅಧಿಕಾರಿಗಳ ಬಗ್ಗೆ ಕಿಡಿಕಾರುವುದುಂಟು. ಸರಕಾರ ರೂಪಿಸಿರುವ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯದೇ ಇದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆಂದು ಗುಡುಗುವುದು ಮಾಧ್ಯಮಗಳಲ್ಲೂ ಸುದ್ದಿಯಾಗುತ್ತದೆ. ಈ ಗುಡುಗು ಸಿಡಿಲುಗಳೆಲ್ಲವೂ ಮಳೆಯಾಗದೆ ಮುಗಿದು ಹೋಗುವುದು ನಮ್ಮ ನಿತ್ಯದ ಜಂಜಡಗಳಲ್ಲಿ ಮರೆತೂ ಹೋಗುತ್ತವೆ. ಮಂತ್ರಿ ಮಹೋದಯರ ಈ ಗುಡುಗಾಟಕ್ಕೆ ಮಳೆ ತರಿಸುವ ಶಕ್ತಿಯೇ ಇಲ್ಲ ಎಂಬುದು ವಾಸ್ತವ. ಲೋಕಾಯುಕ್ತ ಸಂಸ್ಥೆಯನ್ನು ನಮ್ಮ ಸರಕಾರಗಳು ನಡೆಸಿಕೊಳ್ಳುತ್ತಿರುವುದನ್ನು ನೋಡಿದರೆ ಎಲ್ಲವೂ ಅರ್ಥವಾಗುತ್ತದೆ.