Skip to content

Freedom of the present | ಈ ನಡುವಿನ ಬಿಡುವು

ಅಳಿಸಲಾಗದ ಅಕ್ಷರವ ಬರೆಯಲಾಗದು!

Menu
  • Privacy Policy
Menu

Day: October 4, 2008

ಕರ್ನಾಟಕ ರಾಜಕಾರಣದ ದುರಂತ ನಾಯಕರು

Posted on October 4, 2008May 24, 2015 by Ismail

<p>
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನ ಆರ್‌.ವಿ.ದೇಶಪಾಂಡೆಯವರಿಗೆ ದೊರೆತಿದೆ. ಪರಿಣಾಮವಾಗಿ ಸಿದ್ದರಾಮಯ್ಯ ಬೆಂಬಲಿಗರಿಗೆ ಸಿಟ್ಟು ಬಂದಿದೆ. ಈಗವರು `ಅಹಿಂದ'ದ ಮೂಲಕ ರಣಕಹಳೆ ಮೊಳಗಿಸಲಿದ್ದಾರೆ. ಸಿದ್ದರಾಮಯ್ಯನವರೂ ಇದಕ್ಕೆ ಓಗೊಟ್ಟು ಭಾವುಕರಾಗಿ ಮಾತನಾಡುತ್ತಾರೆ. ಇದು ಈ ಹಿಂದೆಯೂ ಸಂಭವಿಸಿತ್ತು. ಆಗ ಸಿದ್ದರಾಮಯ್ಯ ಸೆಕ್ಯುಲರ್‌ ಜನತಾದಳದಲ್ಲಿದ್ದರು. ಆಗ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿ ಹೋಗಿತ್ತೆಂಬ ಅಸಮಾಧಾನವಿತ್ತು. ಅಷ್ಟು ಸಾಲದೆಂಬಂತೆ ದೇವೇಗೌಡರ ಮಗ ಎಚ್‌.ಡಿ.ಕುಮಾರಸ್ವಾಮಿ ಸರಕಾರವನ್ನು ತಮ್ಮ ಅಂಕೆಯಲ್ಲಿಟ್ಟುಕೊಳ್ಳಲು ಬೇಕಾದ ಎಲ್ಲವನ್ನೂ ಮಾಡುತ್ತಿದ್ದರು. ಇದನ್ನು ಪ್ರತಿಭಟಿಸಲು ಸಿದ್ದರಾಮಯ್ಯ `ಅಹಿಂದ' ವೇದಿಕೆ ಬಳಸಿಕೊಂಡರು. ದೇವೇಗೌಡರು ಸಿದ್ದರಾಮಯ್ಯನವರಿಗಿದ್ದ ಉಪ ಮುಖ್ಯಮಂತ್ರಿ ಹುದ್ದೆಯನ್ನೂ ಕಿತ್ತುಕೊಂಡರು.
</p>
<p>
ಈಗ ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲಿದ್ದಾರೆ. ಸೆಕ್ಯುಲರ್‌ ಜನತಾದಳದಿಂದ ದೂರವಾದ ಹೊಸತರಲ್ಲಿ ಎಲ್ಲರಿಗೂ ಕೇಳಿಸುವಂತೆ `ಅಹಿಂದ' ಜಪ ಮಾಡುತ್ತಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್‌ಗೆ ಹತ್ತಿರವಾಗುತ್ತಾ ಹೋದಂತೆ `ಅಹಿಂದ' ಜಪದ ಧ್ವನಿಯನ್ನು ಮೆತ್ತಗಾಗಿಸಿ ಕೊನೆಗೊಮ್ಮೆ ಮೌನ ಜಪಕ್ಕೆ ಶರಣಾಗಿಬಿಟ್ಟರು. ಈಗ ಮತ್ತೆ `ಅಹಿಂದ' ಜಪದ ಧ್ವನಿಯನ್ನು ಸಿದ್ದರಾಮಯ್ಯ ತಾರಕಕ್ಕೆ ಏರಿಸಿದ್ದಾರೆ. ಇದನ್ನು ಕೇಳಿ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದವರೆಲ್ಲಾ ತಮ್ಮ ಕೈ ಹಿಡಿದು ಮೇಲೆತ್ತುತ್ತಾರೆ ಎಂಬ ಭಾವನೆ ಸಿದ್ಧರಾಮಯ್ಯನವರಿಗೂ ಅವರ ತಥಾಕಥಿತ ಬೆಂಬಲಿಗರಿಗೂ ಇರುವಂತೆ ಕಾಣಿಸುತ್ತದೆ.

Read more
October 2008
M T W T F S S
 12345
6789101112
13141516171819
20212223242526
2728293031  
« Sep   Jan »
  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006
  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ
  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
  • Privacy Policy
© 2023 Freedom of the present | ಈ ನಡುವಿನ ಬಿಡುವು | Powered by Superbs Personal Blog theme