ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂಕೇತಿಕವಾದ ಕ್ರಿಯೆಗಳಿಗೂ ಒಂದು ಮಹತ್ವವಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಖುದ್ದಾಗಿ ಪರಿಶೀಲಿಸಲು ಹೊರಡುವುದರಿಂದ ಆರಂಭಿಸಿ ರಾಜಧಾನಿಯ ಹೊರಗೆ ಸಂಪುಟ ಸಭೆ ಮತ್ತು ವಿಧಾನಸಭಾ ಅಧಿವೇಶನಗಳನ್ನು ನಡೆಸುವ ತನಕದ ಅನೇಕ ಕೆಲಸಗಳು ಈ ಸಾಂಕೇತಿಕ ಕ್ರಿಯೆಗಳ ಪರಿಧಿಯಲ್ಲಿ ಬರುತ್ತವೆ. ಚಾಮರಾಜ
ನಗರಕ್ಕೆ ಭೇಟಿ ನೀಡಿದವರೆಲ್ಲಾ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಭ್ರಮೆ ವ್ಯಾಪಕವಾಗಿರುವಾಗ ಮುಖ್ಯಮಂತ್ರಿಯೊಬ್ಬ ಚಾಮರಾಜ ನಗರಕ್ಕೆ ಭೇಟಿ ನೀಡುವುದು ನಿಜಕ್ಕೂ ಮುಖ್ಯವಾಗುತ್ತದೆ. ರಾಜಧಾನಿಯಿಂದ ದೂರವಿರುವ ಪ್ರದೇಶವೊಂದು ಅಭಿವೃದ್ಧಿಯಿಂದಲೂ ದೂರವಿದ್ದಾಗ ಅಲ್ಲೊಂದು ವಿಧಾನಸಭಾ ಅಧಿವೇಶನ ನಡೆಸುವುದು ಇಲ್ಲವೇ ಸಂಪುಟ ಸಭೆಯನ್ನು
ನಡೆಸುವುದು ಬಹಳ ಮುಖ್ಯವಾಗುತ್ತದೆ. ಸರ್ಕಾರ ತಮ್ಮ ಬಳಿಗೆ ಬಂತು ಎಂಬ ಭರವಸೆಯನ್ನು ಆ ಪ್ರದೇಶದ ಜನರಲ್ಲಿ ಮೂಡಿಸುವುದಕ್ಕೆ ಈ ಸಾಂಕೇತಿಕ ಕ್ರಿಯೆ ಸಹಾಯ ಮಾಡುತ್ತದೆ.
Month: January 2009
`ಜ್ಞಾನಾಧಾರಿತ ಆರ್ಥಿಕತೆ’ಯಲ್ಲಿ ಜ್ಞಾನದ ಪ್ರಶ್ನೆ
ಜ್ಞಾನ ಸಮಾಜ, ಜ್ಞಾನಾಧಾರಿತ ಆರ್ಥಿಕತೆ ಎಂಬ ಪದಪುಂಜಗಳನ್ನು ಇತ್ತೀಚಿನ ವರ್ಷಗಳಲ್ಲಿ ಮತ್ತೆ ಮತ್ತೆ ಕೇಳುತ್ತಿದ್ದೇವೆ. ರಾಷ್ಟ್ರೀಯ ಜ್ಞಾನ ಆಯೋಗವಂತೂ ತನ್ನ ವರದಿಗೆ `ಜ್ಞಾನಾಧಾರಿತ ಸಮಾಜದತ್ತ’ ಎಂಬ ಶೀರ್ಷಿಕೆಯನ್ನು ಕೊಟ್ಟಿದೆ. ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ಸ್ಥಾಪನೆಯಾದ ಜ್ಞಾನ ಆಯೋಗ ಕೂಡ ಜ್ಞಾನಾಧಾರಿತ ಆರ್ಥಿಕತೆಯ ಬಗ್ಗೆ, ಜ್ಞಾನ ಸಮಾಜದ ಬಗ್ಗೆ ಹೇಳುತ್ತಿದೆ. ಭಾರತವನ್ನು ಜ್ಞಾನಾಧಾರಿತ ಆರ್ಥಿಕತೆಯನ್ನಾಗಿ ಬೆಳೆಸುವುದರ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಕೂಡಾ ಹೇಳುತ್ತಾರೆ. ಇದೇ ಮಾತುಗಳನ್ನು ಹಣಕಾಸು ಸಚಿವರು ಇನ್ನಷ್ಟು ಸಂಕೀರ್ಣ ಪದಪುಂಜಗಳನ್ನು ಬಳಸಿ ವಿವರಿಸುತ್ತಾರೆ.
ಜ್ಞಾನ ಸಮಾಜದ ಕುರಿತಂತೆ ಯು.ಕೆ.ಯ ಸಸೆಕ್ಸ್ ವಿಶ್ವವಿದ್ಯಾಲಯದ ಸ್ಟೆಪ್ಸ್ ಕೇಂದ್ರ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಾಗೂ ಇನ್ನಿತರ ಸಂಸ್ಥೆಗಳ ಸಹಯೋಗದಲ್ಲಿ ಎರಡು ದಿನಗಳ ಕಾರ್ಯಕ್ರಮವೊಂದನ್ನು ಬೆಂಗಳೂರಿನಲ್ಲಿ ಸಂಘಟಿಸಿತ್ತು. ವಿವಿಧ ವಿಷಯಗಳ ತಜ್ಞರು `ಜ್ಞಾನ ಸಮಾಜ’ವೆಂಬ ಪರಿಕಲ್ಪನೆಯ ಸುತ್ತ ಚರ್ಚೆ ನಡೆಸಿದರು. ದೇಶ-ವಿದೇಶಗಳ ತಜ್ಞರು ಭಾಗವಹಿಸಿದ್ದ `ರೌಂಡ್ ಟೇಬಲ್’ ಪರಿಕಲ್ಪನೆಯ ಸಂಕೀರ್ಣ ಸಮಸ್ಯೆಗಳನ್ನು ಚರ್ಚಿಸಿದರೆ ಮರುದಿನ ಏರ್ಪಾಡಾಗಿದ್ದ ಸಾರ್ವಜನಿಕ ಚರ್ಚೆ ಹಿಂದಿನ ದಿನದ ಚರ್ಚೆಗಳ ಸಾರವನ್ನು ಸಾರ್ವಜನಿಕ ಮಟ್ಟದಲ್ಲಿ ಚರ್ಚಾ ವಿಷಯವನ್ನಾಗಿಸಲು ಪ್ರಯತ್ನಿಸಿತು.
ರಾಷ್ಟ್ರೀಯ ಜ್ಞಾನ ಆಯೋಗದಿಂದ ಆರಂಭಿಸಿ ರಾಜ್ಯ ಜ್ಞಾನ ಆಯೋಗದ ತನಕ, ಪ್ರಧಾನಿಯಿಂದ ಆರಂಭಿಸಿ ಮುಖ್ಯಮಂತ್ರಿಗಳ ತನಕ, ಉದ್ಯಮಿಗಳಿಂದ ಆರಂಭಿಸಿ ವಿದ್ವಾಂಸರ ತನಕ ಎಲ್ಲರೂ ಚರ್ಚಿಸುತ್ತಿರುವ ಈ `ಜ್ಞಾನ ಸಮಾಜ’ ಎಂದರೆ ಏನು? ಈ ಪ್ರಶ್ನೆಗೆ ಸದ್ಯಕ್ಕೆ ದೊರೆಯುವ ಉತ್ತರ ವಿಕಿಪಿಡಿಯಾದ ವ್ಯಾಖ್ಯೆ ಮಾತ್ರ. ಜ್ಞಾನವನ್ನು ಉತ್ಪಾದನೆಯ ಪ್ರಾಥಮಿಕ ಸಂಪನ್ಮೂಲವಾಗಿಟ್ಟುಕೊಂಡಿರುವ ಸಮಾಜವನ್ನು `ಜ್ಞಾನ ಸಮಾಜ’ ಎನ್ನಬಹುದು. `ಉತ್ಪಾದನೆಯ ಪ್ರಾಥಮಿಕ ಸಂಪನ್ಮೂಲವಾಗಿರುವ ಜ್ಞಾನ’ ಯಾವುದು? ಈ ಪ್ರಶ್ನೆಗೆ ಉತ್ತರ ಹುಡುಕಿಕೊಂಡು ಹೊರಟರೆ `ಜ್ಞಾನ ಸಮಾಜ’ವೆಂಬ ಆಧುನಿಕ ಪರಿಕಲ್ಪನೆಯ ಮಿತಿಗಳು ಅರ್ಥವಾಗತೊಡಗುತ್ತವೆ.
ಮುಖ್ಯಮಂತ್ರಿಗಳೇ ನೆನಪಿದೆಯೇ ನಿಮ್ಮ ಪ್ರಣಾಳಿಕೆ
ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಸುಭದ್ರವಾಗಿದೆ. ಪಕ್ಷೇತರ ಶಾಸಕರನ್ನು ಯಾರಾದರೂ ಖರೀದಿಸಿಬಿಟ್ಟರೆ ಸರ್ಕಾರ ಉರುಳಬಹುದೆಂಬ ಭಯ ಅದಕ್ಕಿಲ್ಲ. ಇನ್ನು ಮುಂದೆ ಅದಕ್ಕೆ ತಾನು ಮಾಡಿದ `ಸಂಕಲ್ಪ’ಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ಯಾವ ಅಡ್ಡಿಯೂ ಇಲ್ಲ. ಆದ್ದರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಪಕ್ಷದ ಪ್ರಣಾಳಿಕೆಯನ್ನು ಮತ್ತೊಮ್ಮೆ ಓದಿಕೊಳ್ಳಲು ಇದು ಸಕಾಲ.
2008ರ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯ ಪುಟ-62ರ ಕೊನೆಯ ಸಾಲುಗಳಲ್ಲಿರುವಂತೆ `ಭ್ರಷ್ಟಾಚಾರವನ್ನು ತಡೆಗಟ್ಟುವುದು-ಲೋಕಾಯುಕ್ತವನ್ನು ಹೆಚ್ಚು ಬಲಪಡಿಸುವುದು’ ಸಮೃದ್ಧ ಕರ್ನಾಟಕಕ್ಕಾಗಿ ಬಿಜೆಪಿ ಮಾಡಿರುವ ಸಂಕಲ್ಪಗಳಲ್ಲಿ ಒಂದು. ಇಂಥದ್ದೇ ಸಂಕಲ್ಪವನ್ನು 2004ರ ಲೋಕಸಭಾ ಚುನಾವಣೆಯ ಸಂದರ್ಭದ ಪ್ರಣಾಳಿಕೆಯೂ ಮಾಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಯುದ್ಧ ನಡೆಸುವ ಭರವಸೆಯನ್ನು ಈ ಪ್ರಣಾಳಿಕೆ ನೀಡುತ್ತದೆ. ಆ ಸಾಲುಗಳು ಹೀಗಿವೆ: `ಭಾರತದ ಅಭಿವೃದ್ಧಿ ಪಥದ ಅತಿದೊಡ್ಡ ಅಡ್ಡಿಯೆಂದರೆ ಭ್ರಷ್ಟಾಚಾರದ ಎಂದು ಬಿಜೆಪಿ ಭಾವಿಸುತ್ತದೆ. ಭ್ರಷ್ಟಾಚಾರವು ನಮ್ಮ ಸಮಾಜ ಮತ್ತು ರಾಜಕಾರಣದ ನೈತಿಕತೆಯನ್ನೇ ದುರ್ಬಲಗೊಳಿಸಿದೆ. ಬಹುಕಾಲದ ಕಾಂಗ್ರೆಸ್ ಆಳ್ವಿಕೆ ಸೃಷ್ಟಿ ಮಾಡಿರುವ ಆಡಳಿತ ವ್ಯವಸ್ಥೆಯಲ್ಲಿ ಸ್ವಹಿತಕ್ಕಾಗಿ ಅಧಿಕಾರದ ದುರ್ಬಳಕೆಯೇ ಹೆಚ್ಚಾಗಿದೆ. ಲಂಚ ಕೊಡದೆ ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸವನ್ನೂ ಮಾಡಿಸಿಕೊಳ್ಳಲು ಆಗದ ತೊಂದರೆಯನ್ನು ಜನರು ಅನುಭವಿಸುತ್ತಿದ್ದಾರೆ. ಭ್ರಷ್ಟಾಚಾರವೆಂಬ ಪಿಡುಗನ್ನು ತೊಡೆಯಲು ಎಲ್ಲಾ ಹಂತಗಳಲ್ಲಿಯೂ ಹೋರಾಟ ನಡೆಸಬೇಕೆಂದು ಬಿಜೆಪಿ ಭಾವಿಸುತ್ತದೆ’.
ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಸಾಲುಗಳನ್ನು ಖಂಡಿತ ಮರೆಯಲು ಸಾಧ್ಯವಿಲ್ಲ. ಅವರು ವಿರೋಧ ಪಕ್ಷದಲ್ಲಿರುವಾಗ ಸದನದಲ್ಲಿ ಅವರು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದನ್ನು ಕರ್ನಾಟಕ ಮರೆತಿಲ್ಲ. ಆದರೆ ಇದೇ ಯಡಿಯೂರಪ್ಪನವರ ಸರ್ಕಾರ ಇತ್ತೀಚೆಗೆ ಕೈಗೊಂಡಿದೆ ಎನ್ನಲಾದ ನಿರ್ಧಾರವೊಂದು ಪತ್ರಿಕೆಗಳ ಮೂಲಕ ಕನ್ನಡ ನಾಡಿಗೆ ತಿಳಿಯಿತು.
ಆ ಸುದ್ದಿ ಹೀಗಿದೆ.