ಈಗ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪನವರು ಸಾಮಾನ್ಯ ರೈತನ ಮಗ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿ ಆ ಮೂಲಕ ಬಿಜೆಪಿಯಲ್ಲಿ ದುಡಿದು ಪಕ್ಷವನ್ನು ಬೆಳಸುತ್ತಲೇ ತಾವೂ ಬೆಳೆದವರು. ಇದನ್ನು ಹೇಳಿಕೊಳ್ಳುವುದಕ್ಕೆ ಯಡಿಯೂರಪ್ಪನವರು ಹೆಮ್ಮೆ ಪಡುತ್ತಾರೆ. ತಮ್ಮ ರೈತ ಹೋರಾಟದ ಕಥನವನ್ನು ಜನರ ಮುಂದಿಟ್ಟೇ ಅವರು ಓಟು ಕೇಳುತ್ತಾರೆ.
ಪ್ರಧಾನಿಯಾಗಿದ್ದ ದೇವೇಗೌಡರೂ ಅಷ್ಟೇ. ಪಕ್ಷವನ್ನು ಸಂಘಟಿಸಿ, ಕಟ್ಟಿ, ಬೆಳೆಸಿ, ಒಡೆದು, ತಾವೂ ಬೆಳೆದವರು. ಈ ಪಟ್ಟಿಯನ್ನು ಬಹಳ ಉದ್ದಕ್ಕೆ ಬೆಳೆಸಬಹುದು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ವೀರಪ್ಪ ಮೊಯ್ಲಿ, ಎಸ್.ಬಂಗಾರಪ್ಪ ಮುಂತಾದ ಅನೇಕರು ರಾಜಕೀಯ ಬದುಕಿನ ಆರಂಭದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿದ್ದವರು. ಪಕ್ಷವನ್ನು ಕಟ್ಟುತ್ತಲೇ ತಾವು ಬೆಳೆದವರು. ಆದರೆ ಇಂದು ಕರ್ನಾಟಕದಲ್ಲಿರುವ ಯಾವುದೇ ರಾಜಕೀಯ ಪಕ್ಷದ ಸಾಮಾನ್ಯ ಕಾರ್ಯಕರ್ತನೊಬ್ಬ ಮುಖ್ಯಮಂತ್ರಿ ಪದವಿಯ ಕನಸು ಕಾಣಬಹುದೇ? ಅದು ಬಿಡಿ ಕನಿಷ್ಠ ಶಾಸಕನ ಸ್ಥಾನದ ಕನಸನ್ನಾದರೂ ಕಾಣಲು ಸಾಧ್ಯವಿದೆಯೇ?
ಇದು 1985ರ ಬಿಹಾರ ಕೇಡರ್ನ ಐಎಎಸ್ ಅಧಿಕಾರಿಯೊಬ್ಬರು ಹೇಳಿದ ಕತೆ.
ಕಳೆದ ಎರಡು ವರ್ಷಗಳಲ್ಲಿ ಬಿಹಾರದಿಂದ ಆರಂಭಿಸಿ ಕರ್ನಾಟಕದ ಹಾಸನದ ತನಕ ದಿಡೀರ್ ನ್ಯಾಯದಾನದ ಹಲವು ಪ್ರಕರಣಗಳನ್ನು ನಾವು ಮಾಧ್ಯಮಗಳಲ್ಲಿ ಓದಿ ತಿಳಿದಿದ್ದೇವೆ. ಎರಡು ವರ್ಷಗಳ ಹಿಂದೆ ಬಿಹಾರದ ವೈಶಾಲಿ ಜಿಲ್ಲೆಯ ಧೆಲ್ಫೋರ್ವಾ ಗ್ರಾಮದಲ್ಲಿ ಕಳವು ಆರೋಪಿಯೊಬ್ಬನನ್ನು ಬೀದಿಯಲ್ಲೇ ಭೀಕರವಾಗಿ ಥಳಿಸಿದ್ದು ಟಿ.ವಿ.ಚಾನೆಲ್ಗಳಲ್ಲಿ ಹಲವಾರು ಬಾರಿ ಪ್ರಸಾರವಾಗಿತ್ತು.