Skip to content

Freedom of the present | ಈ ನಡುವಿನ ಬಿಡುವು

ಅಳಿಸಲಾಗದ ಅಕ್ಷರವ ಬರೆಯಲಾಗದು!

Menu
  • Privacy Policy
Menu

Month: April 2009

ಕರ್ನಾಟಕ ಕಾಂಗ್ರೆಸ್‌ ಎಂಬ ಕುರುಸೇನೆ

Posted on April 20, 2009May 24, 2015 by Ismail

ನಂಬಿ ಹಿಡಿದರೆ ನದಿಯ ಮಗ ಹಗೆಯ ಅಂಬಿಗಿಟ್ಟ ಕಾಯವನು
ಸುತ ಸತ್ತ ನೆಪದಲಿ ಧನುವ ಬಿಸುಟನು ಗರಡಿಯಾಚಾರ್ಯ
ಅಂಬು ಬೆಸನವ ಬೇಡಿದರೆ ತೊಡನೆಂಬ ಛಲ ನಿನಗಾಯ್ತು
ಮೂವರ ನಂಬಿ ಕೌರವ ಕೆಟ್ಟ ಅಕಟಕಟೆಂದನಾ ಶಲ್ಯ

ಇದು ಕರ್ಣಪರ್ವ ಯಕ್ಷಗಾನ ಪ್ರಸಂಗದ ಒಂದು ಪದ್ಯ. ತಮ್ಮೆಲ್ಲಾ ಪರಾಕ್ರಮಗಳನ್ನೂ ಕೃಷ್ಣನ `ಆಪರೇಷನ್‌’ಗಳಿಗೆ ಬಲಿಕೊಟ್ಟ ಕುರುಸೇನೆಯ ಅತಿರಥ ಮಹಾರಥರ ಕುರಿತು ಶಲ್ಯ ಆಡಿಕೊಳ್ಳುವುದನ್ನು ಈ ಪದ್ಯ ವಿವರಿಸುತ್ತದೆ.

ರಣರಂಗದಲ್ಲಿ ಕುರುಸೇನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದ ಭೀಷ್ಮ ಶಿಖಂಡಿಯನ್ನು ನೆಪವಾಗಿಟ್ಟುಕೊಂಡು ಶರಶಯ್ಯೆಯಲ್ಲಿ ಮಲಗಿ ಉತ್ತರಾಯಣ ಪುಣ್ಯಕಾಲವನ್ನು ನಿರೀಕ್ಷಿಸತೊಡಗಿದ. ಮಗ ಚಿರಂಜೀವಿಯೆಂದು ತಿಳಿದಿದ್ದರೂ ಅಶ್ವತ್ಥಾಮನೆಂಬ ಆನೆ ಹತ್ಯೆಯಾದ ಸುದ್ದಿಯನ್ನು ನೆಪವಾಗಿಟ್ಟುಕೊಂಡ ದ್ರೋಣಾಚಾರ್ಯ ಯೋಗ ನಿದ್ರೆಗೆ ಪ್ರವೇಶಿಸಿಬಿಟ್ಟ. ಭೀಷ್ಮರಿರುವ ತನಕ ಯುದ್ಧರಂಗಕ್ಕೆ ಬರಲಾರನೆಂದು ಕುಳಿತಿದ್ದ ಕರ್ಣ ರಣರಂಗಕ್ಕೆ ಬಂದ ಮೇಲೆ ಕುಂತಿಗೆ ಕೊಟ್ಟ `ತೊಟ್ಟಂಬ ತೊಡಲಾರೆ’ನೆಂಬ ಭಾಷೆಗೆ ಬದ್ಧವಾಗಿ ಉಳಿದ. ಇವರನ್ನೆಲ್ಲಾ ನಂಬಿ `ಕೌರವ ಕೆಟ್ಟ’ ಎನ್ನುವ ಶಲ್ಯ ಕೂಡಾ ಕರ್ಣನ ತೊಟ್ಟ ಬಾಣವ ತೊಡದ ಪ್ರತಿಜ್ಞೆಯನ್ನು ಖಂಡಿಸಿ ರಥವಿಳಿದು ಕೌರವ ಕೆಡುವುದಕ್ಕೆ ತನ್ನ ಪಾಲನ್ನು ಸೇರಿಸುತ್ತಾನೆ.

ಚುನಾವಣಾ ಕುರುಕ್ಷೇತ್ರದಲ್ಲಿರುವ ಕರ್ನಾಟಕದ ಕಾಂಗ್ರೆಸ್‌ನ ಸ್ಥಿತಿಯೂ ಹೆಚ್ಚು ಕಡಿಮೆ ಮಹಾಭಾರತದ ಕುರುಸೇನೆಯ ಸ್ಥಿತಿಯನ್ನೇ ಹೋಲುತ್ತದೆ. ಹೀಗೆಂದ ಮಾತ್ರಕ್ಕೆ ಕಾಂಗ್ರೆಸ್‌ನ ವಿರುದ್ಧವಿರುವವರೆಲ್ಲಾ ಪಾಂಡವರೆಂದೇನೂ ಭಾವಿಸಬೇಕಾಗಿಲ್ಲ. ಈ ಚುನಾವಣಾ ಕುರುಕ್ಷೇತ್ರದಲ್ಲಿ ಪಾಂಡವ ಪಕ್ಷವೇ ಇಲ್ಲ. ಇರುವವೆಲ್ಲವೂ ಕೌರವ ಪಕ್ಷಗಳೇ. ಇವುಗಳಲ್ಲಿ ಕಾಂಗ್ರೆಸ್‌ ಕೂಡಾ ಒಂದು ಅಷ್ಟೇ.

Read more
April 2009
M T W T F S S
 12345
6789101112
13141516171819
20212223242526
27282930  
« Mar   May »
  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006
  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ
  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
  • Privacy Policy
© 2023 Freedom of the present | ಈ ನಡುವಿನ ಬಿಡುವು | Powered by Superbs Personal Blog theme