ವಷ್ಟು ದೊಡ್ಡ ಸಮಸ್ಯೆಗಳಲ್ಲ. ಬದಲಾವಣೆಯೊಂದರ ಭಾಗ ಎಂದು ಸಮಾಧಾನ ಪಟ್ಟುಕೊಳ್ಳಬಹುದು. ನೋಟು ಮತ್ತು ನಾಣ್ಯದ ರೂಪದಲ್ಲಿ ಹಣವಿದ್ದಾಗ ಅದರ ನಿರ್ವಹಣೆಗೊಂದು ವಿಕೇಂದ್ರೀಕೃತ ಸ್ವರೂಪವಿರುತ್ತದೆ. ಹಣಕಾಸು ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತ ಸಂಶಯ ಬಂದಾಕ್ಷಣ ಗ್ರಾಹಕರು ಏಕಾಏಕಿ ತಮ್ಮ ಹಣವನ್ನು ಹಿಂತೆಗೆಯುತ್ತಾರೆ. ರನ್ ಆನ್ ಬ್ಯಾಂಕ್ ಎಂದು ಕರೆಯುವ ಈ ಪ್ರಕ್ರಿಯೆ ಬ್ಯಾಂಕುಗಳ ಉತ್ತರದಾಯಿತ್ವವನ್ನು ಖಾತರಿ ಪಡಿಸುತ್ತವೆ. ಒಂದು ವೇಳೆ ನಗದನ್ನು ಬಳಸುವುದಕ್ಕೆ ಮಿತಿಯೊಂದನ್ನು ಹೇರಿದರೆ ಈ ಸಾಧ್ಯತೆಯೇ ಇಲ್ಲವಾಗುತ್ತದೆ. ಅಷ್ಟೇ ಅಲ್ಲ ಬ್ಯಾಂಕುಗಳು ತಮ್ಮ ಲಾಭವನ್ನು ದೃಷ್ಟಿಯಲ್ಲಿಟ್ಟುಕೊಂಡು ಜೂಜಿನಂಥ ವ್ಯವಹಾರಗಳಿಗೆ ಇಳಿದುಬಿಡುತ್ತವೆ. ಅಮೆರಿಕದ ಗೃಹಸಾಲದ ಸಮಸ್ಯೆ ಸೃಷ್ಟಿಯಾದದ್ದೇ ಹೀಗೆ.
Month: December 2017
ಇಂಟರ್ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
ಇನ್ನೊಂದು ದಿನ ಕಳೆದರೆ ನೋಟು ರದ್ದತಿಗೆ ಒಂದು ತಿಂಗಳು ತುಂಬುತ್ತದೆ. ನವೆಂಬರ್ 8ರ ರಾತ್ರಿ ಪ್ರಧಾನ ಮಂತ್ರಿ ದೇಶವನ್ನುದ್ದೇಶಿಸಿ ಮಾತನಾಡಿ 500 ಮತ್ತು 1000 ರೂಪಾಯಿ ನೋಟುಗಳ ಚಲಾವಣೆಯನ್ನು ರದ್ದು ಪಡಿಸಿದ ಘೋಷಣೆ ಮಾಡುವಾಗ ಇದು ಕಪ್ಪು ಹಣದ ನಿಯಂತ್ರಣಕ್ಕೆ ಅಗತ್ಯ ಎಂದಿದ್ದರು. ಅವರ ಮಾತುಗಳಲ್ಲಿ ಭಯೋತ್ಪಾದಕರಿಗೆ ದೊರೆಯುತ್ತಿರುವ ಸಂಪನ್ಮೂಲವನ್ನು ಕಡಿತಗೊಳಿಸುವುದು, ಖೋಟಾ ನೋಟುಗಳ ನಿಯಂತ್ರಣ ಇತ್ಯಾದಿಗಳೆಲ್ಲವೂ ಇದ್ದವು. ಈಗ ವಾದ ಸರಣಿ ಬದಲಾಗಿದೆ. ಪ್ರಧಾನಿ ಮಂತ್ರಿಯಾದಿಯಾಗಿ ನೋಟು ರದ್ಧತಿಯ ನಿರ್ಧಾರವನ್ನು ಸಮರ್ಥಿಸುವವರೆಲ್ಲರೂ ಭಾರತವನ್ನು ‘ನಗದು ರಹಿತ’…