ನಳಿನಿ ಜಮೀಲಾ– ಈ ಹೆಸರು ಕೇರಳದಲ್ಲಿ ಜನಜನಿತ. ಕಾರಣ ಆಕೆ ಬರೆದ ಆತ್ಮಕಥೆ.`ಲೈಂಗಿಕ ವೃತ್ತಿ ನಿರತಳೊಬ್ಬಳ ಆತ್ಮಕತೆ’ ಎಂಬ ಶೀರ್ಷಿಕೆಯ ಈ ಪುಸ್ತಕ ಸಂಪ್ರದಾಯಬದ್ಧ ಮನಸ್ಸುಗಳನ್ನೂ ಸ್ತ್ರೀವಾದಿಗಳನ್ನೂ ಏಕಕಾಲದಲ್ಲಿ ಕೆಣಕಿತ್ತು. ವೇಶ್ಯೆಯಾಗಿರುವುದೂ ಒಂದು ವೃತ್ತಿಯಾಗಬಹುದು ಎಂದು ಧೈರ್ಯವಾಗಿ ಹೇಳುವ ಮಹಿಳೆ ಸದ್ಯ ಕೇರಳಾ ಸೆಕ್ಸ್ ವರ್ಕರ್ಸ್ ಫೋರಂನ ಸಂಚಾಲಕಿಯಾಗಿದ್ದಾರೆ. ಪ್ರಸ್ತುತ ಲೇಖನದಲ್ಲಿ ತಮ್ಮ ಎರಡು ರಾತ್ರಿಗಳ ನೆನಪುಗಳನ್ನು ದಾಖಲಿಸಿದ್ದಾರೆ. ನಳಿನಿ ಜಮೀಲಾರ ಮಾತುಗಳನ್ನು ಮಲಯಾಳಂನಲ್ಲಿ ಪಿ.ಸಿ. ಹರೀಶ್ ಲೇಖನ ರೂಪಕ್ಕೆ ಇಳಿಸಿದ್ದರು. ಅದನ್ನಿಲ್ಲಿ ಅನುವಾದಿಸಲಾಗಿದೆ.
ಕರ್ನಾಟಕ ರಾಜಕಾರಣದ ರಕ್ಷಣಾ ಪರ್ವವು
`ಜಾತ್ಯತೀತತೆಯ ರಕ್ಷಣೆ’ ಮತ್ತು `ಸ್ವ ಪಕ್ಷ ರಕ್ಷಣೆ’ಗಳೆರಡರ ಹೊಣೆಯನ್ನೂ ಹೊತ್ತ ಕುಟುಂಬವೊಂದಿದ್ದರೆ ಅದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರದ್ದು. ಈ `ರಕ್ಷಣೆ’ಗಳ ಕಾರಣಕ್ಕಾಗಿ ಅದು ಕೆಲವು ತೀರ್ಮಾನಗಳನ್ನು ಕೈಗೊಳ್ಳುತ್ತದೆ. ಇವು ಕೌಟುಂಬಿಕ ತೀರ್ಮಾನವಾಗಿದ್ದರೂ ಅದನ್ನು ಜೆಡಿಎಸ್ ಎಂಬ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಕೈಗೊಂಡಂತೆ ಇರುತ್ತವೆ. ಇಲ್ಲವೇ ಪಕ್ಷ ಸಂಘಟನೆಯಲ್ಲಿ/ಸರಕಾರದಲ್ಲಿ ಇರುವ ಅವರ ಮಕ್ಕಳು ಕೈಗೊಂಡಂತೆ ಕಾಣಿಸುತ್ತವೆ. ತೀರಾ ಮುಖ್ಯವಾದ ವಿಚಾರವಾಗಿದ್ದರೆ ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಮಾರ್ಗದರ್ಶನದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಕೈಗೊಂಡಂತೆ ಇರುತ್ತದೆ.
ಸಾವಿರ ವರ್ಷ ಬದುಕಬೇಕಿದ್ದ ಜೀವ
<div style="text-align: center">
<img src="/files/images/veenadhari_0.jpg" alt="" width="318" height="325" />
</div>
<blockquote>
<span style="color: #333399">
ಸಾವಿರಾರು ವರ್ಷ ಬದುಕುಳಿಯಲೇ ಬೇಕಾಗಿದ್ದ ಜೀವ ವೀಣಾಧರಿಯವರದ್ದು. ಎಚ್ಐವಿ ಬಾಧಿತರೆಲ್ಲರಲ್ಲೂ ಜೀವನೋತ್ಸಾಹವನ್ನು ಪುಟಿಯುವಂತೆ ಮಾಡಿವರೀಕೆ. ನಾಲ್ಕು ವರ್ಷಗಳ ಹಿಂದೆ ಪರೀಕ್ಷೆಯೊಂದಕ್ಕಾಗಿ ಮಂಗಳೂರಿನಲ್ಲಿದ್ದಾಗ ವೀಣಾರ ಪರಿಚಯವಾಯಿತು. ನಾನು ಉಳಿದುಕೊಂಡಿದ್ದ ಗೆಳೆಯರ ಮನೆಯ ಸಮೀಪವೇ ವೀಣಾ ಅವರ ಮನೆ ಮತ್ತು ಕಚೇರಿ. ನನ್ನ ಮಂಗಳೂರಿನ ಗೆಳೆಯರೆಲ್ಲರಿಗೂ ಪರಿಚಿತರೂ ಹತ್ತಿರದವರೂ ಆಗಿದ್ದ ವೀಣಾ ಅವರ ಬದುಕಿನ ಕಥೆ ಕೇಳಿ ನನಗೂ ಕುತೂಹಲ ಉಂಟಾಯಿತು. ಮೆಂಡೋನ್ಸಾ ಕಾಂಪೌಂಡ್ ನಲ್ಲಿದ್ದ ನಮ್ಮ ಮನೆಯಲ್ಲಿ ಕುಳಿತು ಆ ಸಂಜೆ ವೀಣಾ ಸುಮಾರು ಎರಡು ಗಂಟೆಗಳ ಕಾಲ ಮಾತನಾಡಿದ್ದರು. ಅದಷ್ಟನ್ನೂ ನಾನು ಧ್ವನಿಮುದ್ರಿಸಿದ್ದೆ. ಅದರ ಆಯ್ದ ಭಾಗಗಳನ್ನು ಒಂದು ಲೇಖನವಾಗಿಸಿ ಉದಯವಾಣಿಯ ಮಹಿಳಾ ಸಂಪದ ಪುರವಣಿಯಲ್ಲಿ ಪ್ರಕಟಿಸಿದ್ದೆ. ವೀಣಾರ ದಿಟ್ಟ ನಿಲುವುಗಳನ್ನು ಹೊರಜಗತ್ತಿಗೆ ಪರಿಚಯಿಸಿದ ಮೊದಲ ಬರೆಹ ಇದು. ಆಮೇಲೆ 'ತರಂಗ' ವಾರಪತ್ರಿಕೆ ಇವರ ಬದುಕಿನ ಕತೆಯನ್ನು ಮುಖಪುಟ ಲೇಖನವಾಗಿ ಪ್ರಕಟಿಸಿತು. ಹಾಯ್ ಬೆಂಗಳೂರಿನ ರವಿ ಬೆಳಗರೆಯವರಂತೂ ವೀಣಾರ ಆಂದೋಲನಕ್ಕೆ ಸಕಲ ರೀತಿಯ ನೆರವುಗಳನ್ನು ನೀಡಿದರು. ಅಷ್ಟೇ ವೀಣಾರನ್ನು ತಮ್ಮ ಮನೆಯ ಸದಸ್ಯರಂತೆ ನೋಡಿಕೊಂಡರು. ಎಚ್ ಐವಿಯೊಂದಿಗೆ ನೇರ ಸಂಬಂಧವೇ ಇಲ್ಲದ ಮೆದುಳಿನ ರಕ್ತ ಸ್ರಾವದಿಂದ ವೀಣಾ ತೀರಿಕೊಂಡರು. ಅವರ ನೆನಪಿಗಾಗಿ ಈ ಹಳೆಯ ಲೇಖನವನ್ನು ಇಲ್ಲಿ ಪ್ರಕಟಿಸುತ್ತಿದ್ದೇನೆ.</span>
</blockquote>
ಮುಸ್ಲಿಮರಾದರೆ ಸುಮ್ಮನಿರುತ್ತಿದ್ದರೇ?
ನನ್ನ ಹೆಸರು ಇಸ್ಮಾಯಿಲ್ ಎಂದಿರುವುದರಿಂದ ಅನೇಕ ಸಂದರ್ಭಗಳಲ್ಲಿ ನನಗೆ ಬೇಕಿಲ್ಲದಿದ್ದರೂ ನಾನು ಮುಸ್ಲಿಮರ ಪ್ರತಿನಿಧಿಯಾಗಿಬಿಡುತ್ತೇನೆ. ಮತ-ಧರ್ಮದ ಕುರಿತ ನನ್ನ ವೈಯಕ್ತಿಕ ನಿಲುವುಗಳ ಬಗ್ಗೆ ಅರಿವಿರುವ ಹತ್ತಿರದ ಗೆಳೆಯರನ್ನು ಹೊರತು ಪಡಿಸಿದರೆ ನಾನೊಬ್ಬ ಮುಸ್ಲಿಮ ಎಂಬ ಪೂರ್ವಗ್ರಹದೊಂದಿಗೆ ಚರ್ಚೆಗಿಳಿಯುವ ಅನೇಕರಿದ್ದಾರೆ. ಈ ಬಗೆಯ ಚರ್ಚೆಗಳಿಂದ ದೂರ ಉಳಿಯಲು ನಾನು ಪ್ರಯತ್ನಿಸಿದರೂ ಕೆಲವೊಮ್ಮೆ ಅದರಿಂದ ಪಾರಾಗಲು ಸಾಧ್ಯವಾಗುವುದಿಲ್ಲ.
ಇದ್ದವರಿಬ್ಬರಲ್ಲಿ ಕದ್ದವರಾರು?
ಕರ್ನಾಟಕದಲ್ಲಿ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದದ್ದು ಮತ್ತು ಆ ಅವಧಿಯದ್ದಕ್ಕೂ ಕರ್ನಾಟಕ ಬರದ ಬಾಧೆಯನ್ನು ಅನುಭವಿಸಿದ್ದನ್ನು ಬಹುಶಃ ಯಾರೂ ಮರೆತಿರಲಿಕ್ಕಿಲ್ಲ. ಈ ಅವಧಿಯಲ್ಲಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಅವರ ಸಂಪುಟ ಸಹೋದ್ಯೋಗಿಗಳಾದ ಧರ್ಮಸಿಂಗ್, ಮಲ್ಲಿಕಾರ್ಜುನ ಖರ್ಗೆ ಮುಂತಾದವರು ಕೇಂದ್ರ ಸರಕಾರ ಬರ ಪರಿಹಾರಕ್ಕೆ ಅಗತ್ಯವಿರುವ ಸಂಪನ್ಮೂಲವನ್ನು ಒದಗಿಸುತ್ತಿಲ್ಲ ಎಂದು ಮೇಲಿಂದ ಮೇಲೆ ಹೇಳಿದ್ದೂ ಪತ್ರಿಕೆಗಳನ್ನು ಓದುವ, ಟಿ.ವಿ.ನೋಡುವ ಎಲ್ಲರಿಗೂ ನೆನಪಿರಬೇಕು.ಆಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರಕಾರವಿತ್ತು. ಕರ್ನಾಟಕದ ಅನಂತಕುಮಾರ್ ಮತ್ತು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿದ್ದ ವೆಂಕಯ್ಯ ನಾಯ್ಡು ಕೇಂದ್ರ ಸಚಿವ ಸಂಪುಟದಲ್ಲಿದ್ದರು. ಕೇಂದ್ರದ ನೆರವಿಗೆ ಸಂಬಂಧಿಸಿದಂತೆ ಕರ್ನಾಟಕದ ಅಧಿಕಾರಾರೂಢ ಕಾಂಗ್ರೆಸ್ಸಿಗರ ಟೀಕೆ ಹೆಚ್ಚುತ್ತಲೇ ಹೋದಾಗ ಇಬ್ಬರೂ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದರು. ಕೇಂದ್ರ ಬರ ಪರಿಹಾರಕ್ಕೆಂದು ಒದಗಿಸಿದ್ದ ಹಣವನ್ನು ರಾಜ್ಯ ಸರಿಯಾಗಿ ಬಳಸಿಕೊಂಡಿಲ್ಲ. ಬಹಳಷ್ಟು ಹಣ ಬಳಸದೆಯೇ ಲ್ಯಾಪ್ಸ್ (laps) ಆಗಿದೆ ಎಂದಲ್ಲಾ ಗದ್ದಲವೆಬ್ಬಿಸಿದ್ದರು. ಇದಕ್ಕೆ ಕರ್ನಾಟಕದಲ್ಲಿ ವಿರೋಧ ಪಕ್ಷವಾಗಿದ್ದ ಬಿಜೆಪಿಯ ಜಗಧೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮುಂತಾದವರೆಲ್ಲಾ ಧ್ವನಿಗೂಡಿಸಿ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಅಪ್ಪ, ನಕ್ಷತ್ರ ಮತ್ತು ಜಿ.ಟಿ.ಎನ್
ನಾವಿನ್ನೂ ಚಿಕ್ಕವರು. ನಾನು ಐದನೇ ಕ್ಲಾಸಿನಲ್ಲಿದ್ದೆ ಎನಿಸುತ್ತದೆ. ನಮ್ಮ ಅಪ್ಪನಿಗೆ ಒಂದು ಕಿರಾಣಿ ಅಂಗಡಿಯಿತ್ತು. ಪ್ರತೀ ಮಂಗಳವಾರ ನಸುಕಿಗೇ ಎದ್ದು ಅಪ್ಪ ಸೈಕಲ್ ಹತ್ತಿ ಹಾಸನದ ಸಂತೆಗೆ ಹೊರಡುತ್ತಿದ್ದರು. ವಾರವಿಡೀ ಅಂಗಡಿಗೆ ಬೇಕಾದ ಸರಕನ್ನೆಲ್ಲಾ ಆ ದಿನ ಸಂತೆಯಲ್ಲಿ ಖರೀದಿಸಿ ಗಾಡಿ ರಾಜಣ್ಣನ ಗಾಡಿಗೆ ತುಂಬಿಸಿ ರಾತ್ರಿ ಎಂಟು ಗಂಟೆಗೆ ಗಾಡಿಯ ಜತೆಗೇ ಮನೆಗೆ ಹಿಂದಿರುಗುತ್ತಿದ್ದರು. ಮಂಗಳವಾರವಿಡೀ ಅಪ್ಪ ಮನೆಯಲ್ಲಿ ಇರುತ್ತಿರಲಿಲ್ಲವಾದ್ದರಿಂದ ಶಾಲೆಯಿಂದ ಹಿಂದಿರುಗಿದ ತಕ್ಷಣ ನಾನೂ ನನ್ನ ತಮ್ಮ ಮನೆಯಲ್ಲಿರುವ ರೇಡಿಯೋ, ಗಡಿಯಾರ, ಮೂಲೆಯಲ್ಲಿ ಮುಸುಕು ಹೊದ್ದು ತಣ್ಣಗೆ ಕುಳಿತಿರುತ್ತಿದ್ದ ನೀರೆತ್ತುವ ಡೀಸೆಲ್ ಪಂಪ್ಗಳ `ತಂತ್ರಜ್ಞಾನ'ವನ್ನು ಅರಿಯಲು ಹರಸಾಹಸ ಮಾಡುತ್ತಿದ್ದೆವು. ಅಮ್ಮನ ಕಣ್ಣು ತಪ್ಪಿಸಿ ಮಾಡುವ ಈ ಕೆಲಸಕ್ಕಾಗಿ ನಾವು ಬಳಸುತ್ತಿದ್ದ ತಂತ್ರಗಳದ್ದೇ ಒಂದು ದೊಡ್ಡ ಕಥೆಯಾಗಿಬಿಡುತ್ತದೆ.
ಹಿರಿತೆರೆಯಲ್ಲಿ ಕಾಣಿಸದ ಸೀತಾರಾಂ ಮ್ಯಾಜಿಕ್
ಕಿರುತೆರೆಯ ಸ್ಟಾರ್ ನಿರ್ದೇಶಕ ಟಿ ಎನ್ ಸೀತಾರಾಂ 'ಮೀರಾ ಮಾಧವ ರಾಘವ' ಎಂಬ ಸಿನಿಮಾ ನಿರ್ದೇಶಿಸಿದ್ದಾರೆ. ಈ ಚಿತ್ರದ ಪ್ರೀಮಿಯರ್ ಪ್ರದರ್ಶನಕ್ಕೇ ಹೋಗಿದ್ದೆ. ನೋಡಿ ನಿರಾಶೆಯಾಯಿತು.
ತೇಜಸ್ವಿ ನೆನಪು
ತೇಜಸ್ವಿಯವರ ಕಿರಗೂರಿನ ಗಯ್ಯಾಳಿಗಳು ಕತೆಯ ಆರಂಭದ ಸಾಲುಗಳು ಹೇಳುವಂತೆ `ಎಲ್ಲಾ ಶುರುವಾಗಿದ್ದು ಕಿರಗೂರಿನ ಮೇಲೆ ಮೂರು ರಾತ್ರಿ, ಮೂರು ಹಗಲು ಇದ್ದಕ್ಕಿದ್ದಂತೆ ಬೀಸಿದ ಬಿರುಗಾಳಿಯ ದೆಸೆಯಿಂದ’. ನನಗೂ ತೇಜಸ್ವಿ ಪರಿಚಯವಾಗಿದ್ದು ಹೀಗೆಯೇ.
ಕನ್ನಡವೆಂಬ ಸಸ್ಯಾಹಾರಿ ಭಾಷೆ
ಹಾರುವವುಗಳಲ್ಲಿ ವಿಮಾನವನ್ನೂ, ಎರಡು ಕಾಲಿನವುಗಳಲ್ಲಿ ಮನುಷ್ಯರನ್ನೂ, ನಾಲ್ಕು ಕಾಲಿನವುಗಳಲ್ಲಿ ಕುರ್ಚಿ, ಮೇಜುಗಳನ್ನು ಮಾತ್ರ ತಿನ್ನದೇ ಬಿಟ್ಟಿರುವ ನನ್ನಂಥ ಕನ್ನಡಿಗರಿಗೆ ಈ ಪ್ರಶ್ನೆ ಆಗಾಗ ಕಾಡುತ್ತಿರುತ್ತದೆ.
About
ಬಾಂಡ್ ಸ್ಟೈಲ್ ನಲ್ಲಿ ನನ್ನ ಹೆಸರು ಹೇಳಲು ಇಷ್ಟ. ಇದನ್ನು ಕೇಳಿ ನೀವು ಗಾಬರಿಯಾಗದಿದ್ದರೆ ಸರಿ. ನಾನು ಇಸ್ಮಾಯಿಲ್, ಮಹಮ್ಮದ್ ಇಸ್ಮಾಯಿಲ್, ಅಬ್ಬು ಮಹಮ್ಮದ್ ಇಸ್ಮಾಯಿಲ್, ನಲ್ಲೂರು ಅಬ್ಬು ಮಹಮ್ಮದ್ ಇಸ್ಮಾಯಿಲ್. ಹೆಸರು ಇಷ್ಟೆಲ್ಲಾ ಉದ್ದವಿದ್ದರೆ ಹೇಳುವುದು ಕಷ್ಟ ಎಂದು ಅದನ್ನು ಎನ್ ಎ ಎಂ ಇಸ್ಮಾಯಿಲ್ ಮಾಡಿಕೊಂಡಿದ್ದೇನೆ.
ವೃತ್ತಿ ಪತ್ರಕರ್ತನದ್ದು. ಸದ್ಯ ಪ್ರಜಾವಾಣಿಯಲ್ಲಿ ಮುಖ್ಯ ಉಪಸಂಪಾದಕನಾಗಿದ್ದೇನೆ. ಬರೆಯುವುದೇ ಕೆಲಸವಾದ್ದರಿಂದ ಬ್ಲಾಗ್ ಗಾಗಿ ಪ್ರತ್ಯೇಕ ಬರೆಯಬೇಕೆಂಬ ಆಸೆಯಿದ್ದರೂ ಅದನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾನು ಕೆಲಸ ಮಾಡುವ ಪತ್ರಿಕೆಗಳಿಗೆ ಬರೆದ ಬರೆಹಗಳೇ ಇಲ್ಲಿ ಹೆಚ್ಚು.