Freedom of the present | ಈ ನಡುವಿನ ಬಿಡುವು

Menu
  • Privacy Policy
Menu

ಯೇಸುಕ್ರಿಸ್ತ

Posted on October 2, 2006April 10, 2019 by admin

ನಾರಾಯಣ ಗುರುಗಳ ಪರಂಪರೆಯ ಗುರು ನಿತ್ಯಚೈತನ್ಯ ಯತಿಗಳು ಎಲ್ಲ ಧರ್ಮಗಳ ಬಗ್ಗೆಯೂ ಆಳವಾದ ಅರಿವಿದ್ದವರು. ದೇಹಕ್ಕೆ ಬಾಧಿಸುವ ರೋಗಗಳಿಗಿಂತಲೂ ಹೆಚ್ಚಾಗಿ ಮನುಷ್ಯನನ್ನು ಕಾಡುವುದು ಮನಸ್ಸಿಗೆ ಬಾಧಿಸುವ ಆಧ್ಯಾತ್ಮಿಕ ರೋಗಗಳು. ಈ ರೋಗಗಳನ್ನು ಪರಿಹರಿಸಿದ ಮಹಾವೈದ್ಯರಲ್ಲಿ ಯೇಸು ಕ್ರಿಸ್ತರೂ ಇದ್ದಾರೆಂಬುದು ಯತಿಗಳ ಅನಿಸಿಕೆ. ಅವರು ಈ ಬಗೆಯ ಅಪೂರ್ವ ವೈದ್ಯರ ಕುರಿತು ರಚಿಸಿರುವ ಗ್ರಂಥದಲ್ಲಿರುವ ಯೇಸುವಿನ ಕುರಿತ ಬರೆಹದ ಭಾವಾನುವಾದ ಇಲ್ಲಿದೆ.

ಗುರುಕುಲದಲ್ಲಿ ನನಗೊಬ್ಬ ಗೆಳೆಯನಿದ್ದಾನೆ. ಹೆಸರು ಜೋಸೆಫ್‌. ಆತ ಮಾಡುವ ಕೆಲಸ; ಕಳೆದ ಎರಡು ಸಾವಿರ ವರ್ಷಗಳಿಂದಲೂ ಉಳಿದುಕೊಂಡು ಬಂದಿರುವ ಬಡಗಿಯ ಕೆಲಸ. ನಾವಿಬ್ಬರು ಒಟ್ಟಿಗೆ ಕುಳಿತು ಮಾತನಾಡುವಾಗಲೆಲ್ಲಾ ನನ್ನನ್ನು ಬಹಳವಾಗಿ ಆಕರ್ಷಿಸುವುದು ಈ ಜೋಸೆಫ್‌ನ ಮಗ. ಅಪ್ಪನಿಂದ ಬರುವುದನ್ನೆಲ್ಲಾ ಈ ಮಗ ಪಡೆದುಕೊಂಡಿದ್ದ. ನಾನವನನ್ನು ಯೇಸು ಎಂದೇ ಕರೆಯುತ್ತಿದ್ದೆ. ಯೇಸು ಎಂಬ ಪದದ ಅರ್ಥ ಮತ್ತಾಯನು ಬರೆದ ಸುವಾರ್ತೆಯಲ್ಲಿ ಹೇಳಿರುವಂತೆ `ಜನಗಳನ್ನು ಪಾಪಗಳಿಂದ ಕಾಪಾಡುವವನು' ಎಂದಾಗಿದೆ. ಇಂದು ಮುಂಜಾನೆ ಗೆಳೆಯ ಜೋಸೆಫ್‌ ಜತೆ ಮಾತನಾಡಲು ತೊಡಗಿದಾಗ ವಾಗ್‌ರೂಪಿಯಾದ ಯೇಸುವನ್ನು ಕಂಡ ನಾನು ಕೇಳಿದೆ:

`ನೀನು ಹೇಗೆ ಜನರನ್ನು ಪಾಪಗಳಿಂದ ವಿಮೋಚಿಸುತ್ತೀಯಾ?'

ಆಗ ಯೇಸು ಪ್ರಶ್ನಿಸಿದ: `ಬೈಬಲ್‌ನ ಆದಿ ಕಾಂಡವನ್ನು ಓದಿದ್ದೀಯಾ?' ನಾನು ಹೌದೆಂದು ಗೋಣಾಡಿಸಿದೆ. ಸಂಭಾಷಣೆ ಮುಂದುವರಿಯಿತು.

ಯೇಸು: ಅದರಲ್ಲಿ ಹೇಳಲಾದ ಮೂರು ಆದಿಗಳು ಗೊತ್ತೇ?

Read more

ಚಾರ್ಲ್ಸ್‌ ಮಿನೆಜೆಸ್‌ ಎಂಬ ಜೋಸೆಫ್‌ ಕೆ.

Posted on September 11, 2006May 24, 2015 by admin

ಕಳೆದ ವರ್ಷ ಅಂದರೆ 2005ರ ಜುಲೈ ತಿಂಗಳಲ್ಲಿ ಲಂಡನ್ ಸ್ಫೋಟ ಸಂಭವಿಸಿತು. ಈ ಘಟನೆಯ ನಂತರ ಬ್ರೆಜಿಲ್ ನ ಯುವಕನೊಬ್ಬನನ್ನು ಲಂಡನ್ ಪೊಲೀಸರು 'ತಪ್ಪಾಗಿ' ಕೊಂದು ಬಿಟ್ಟರು. ಇದೇ ಹೊತ್ತಿಗೆ ಕಾಶ್ಮೀರದಲ್ಲೂ ಸೇನಾ ಪಡೆಗಳು ಮಕ್ಕಳನ್ನು ಉಗ್ರಗಾಮಿಗಳೆಂದು ಭಾವಿಸಿ ಕೊಂದ ಘಟನೆಯೂ ನಡೆದಿತ್ತು. ಆಗ ಬರೆದ ಲೇಖನ ಇದು.

Read more

ನಾದಯೋಗಿಯ ಮೇಲೊಂದು ಪ್ರಯೋಗ

Posted on May 22, 2006May 24, 2015 by admin

ಗುರು ನಿತ್ಯಚೈತನ್ಯ ಯತಿ 1924ರಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಮುರಿಞಕಲ್ಲ್‌ ಎಂಬಲ್ಲಿ ಹುಟ್ಟಿದರು. 1952ರಲ್ಲಿ ಶ್ರೀ ನಾರಾಯಣಗುರುಗಳ ಉತ್ತರಾಧಿಕಾರಿಯಾಗಿದ್ದ ಶ್ರೀ ನಟರಾಜಗುರುಗಳ ಶಿಷ್ಯತ್ವ ಸ್ವೀಕರಿಸಿದರು. ತತ್ವಶಾಸ್ತ್ರ ಮತ್ತು ಮನೋವಿಜ್ಞಾನದ ವಿದ್ವಾಂಸರಾಗಿದ್ದ ಶ್ರೀ ನಿತ್ಯಚೈತನ್ಯ ಯತಿ ಇಂಗ್ಲಿಷ್‌ ಹಾಗೂ ಮಲೆಯಾಳಂನಲ್ಲಿ ಹಲವು ಗ್ರಂಥಗಳನ್ನು ರಚಿಸಿದ್ದಾರೆ. 1999ರಲ್ಲಿ ಸಮಾಧಿಸ್ಥರಾಗುವವರೆಗೂ ಫರ್ನ್‌ ಹಿಲ್ಸ್‌ನ ನಾರಾಯಣ ಗುರುಕುಲಂ ಮತ್ತು ಈಸ್ಟ್‌ ವೆಸ್ಟ್‌ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿದ್ದರು. ಯತಿಗಳ `ಮರಕ್ಕಾನಾವತ್ತವರ್‌’ ಪುಸ್ತಕದಲ್ಲಿರುವ ಇಬ್ಬರು ಅಸಾಧಾರಣ ಯೋಗಿಗಳ ಕುರಿತ ಲೇಖನದ ಆಯ್ದ ಭಾಗದ ಭಾವಾನುವಾದ ಇಲ್ಲಿದೆ.

1964ರಲ್ಲಿ ಯಾವುದೋ ಕಾರಣಕ್ಕಾಗಿ ಋಷಿಕೇಶಕ್ಕೆ ಹೋಗಿ ಶಿವಾನಂದಾಶ್ರಮದಲ್ಲಿ ಉಳಿದುಕೊಳ್ಳಬೇಕಾಯಿತು. ಅಲ್ಲಿರುವ ಒಂದು ಕಟ್ಟಡದಿಂದ ರಾತ್ರಿ ಹಗಲೆನ್ನದೆ ಹಾಡು ಕೇಳಿಬರುತ್ತಿತ್ತು. ಈ ಹಾಡಿನ ಮಾಧುರ್ಯಕ್ಕೆ ಮಾರುಹೋದ ನಾನು ಆ ಕಟ್ಟಡ ಬಾಗಿಲನ್ನೊಮ್ಮೆ ತಟ್ಟಿ ನೋಡಿದೆ. ಆಗ ಹಾಡು ನಿಂತು ಬಾಗಿಲು ತೆರೆದುಕೊಂಡಿತು.
ಬಾಗಿಲು ತೆರೆದದ್ದು ಸುಮಾರು ಐವತ್ತರ ಆಸುಪಾಸಿನಲ್ಲಿದ್ದ ಒಬ್ಬ ಸನ್ಯಾಸಿ. ಕಾವಿಧಾರಿ. ಮುಂಡನಕ್ಕೆ ಒಳಗಾದ ತಲೆ. ಮುಖದಲ್ಲಿಯೂ ಕೂದಲುಗಳಿಲ್ಲ.
ಸನ್ಯಾಸಿಗಳ ಹೆಸರು ಕೇಳುವ ಅಗತ್ಯವಿಲ್ಲ. ಸುಮ್ಮನೆ ಸ್ವಾಮೀಜಿ ಎಂದು ಕರೆದರೆ ಸಾಕು. `ಸ್ವಲ್ಪ ಹೊತ್ತು ಹಾಡು ಕೇಳಲೇ ಸ್ವಾಮೀಜಿ?’ ಎಂದೆ.

Read more
  • Previous
  • 1
  • …
  • 4
  • 5
  • 6
  • 7

Recent Posts

  • ಪ್ರಜೆಗಳನ್ನು ಬೆತ್ತಲಾಗಿಸುವ ಅಪಾರದರ್ಶಕ ಪ್ರಭುತ್ವ
  • ಇಂಟರ್‌ನೆಟ್ ಇಲ್ಲದ ಡಿಜಿಟಲ್ ಆರ್ಥಿಕತೆ!
  • ನೋಟು ರದ್ದತಿಯಲ್ಲಿ ಕಂಡ ಡಿಜಿಟಲ್ ಡಿವೈಡ್
  • ಮಾಧ್ಯಮ ನಿಯಂತ್ರಣದ ‘ಭದ್ರತಾ’ ತಂತ್ರಗಳು
  • ಒಮ್ಮುಖ ಪಾರದರ್ಶಕತೆಯ ತಂತ್ರಜ್ಞಾನಾಧಾರಿತ ಪ್ರಭುತ್ವ

Recent Comments

  • Balu on ಭಿನ್ನಮತದ ದ್ರವೀಕರಣ ಸಾಧ್ಯತೆಯು
  • ಖಿನ್ನಮತೀಯ on ಭಿನ್ನಮತದ ದ್ರವೀಕರಣ ಸಾಧ್ಯತೆಯು
  • ismail on ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
  • --ಶ್ರೀ--- on ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
  • ismail on ಸಂಪಂಗಿ ಪ್ರಕರಣದಾಚೆಗಿನ ಸತ್ಯಗಳು

Archives

  • December 2017
  • November 2017
  • March 2017
  • February 2017
  • January 2017
  • June 2014
  • March 2010
  • June 2009
  • May 2009
  • April 2009
  • March 2009
  • February 2009
  • January 2009
  • October 2008
  • September 2008
  • August 2008
  • July 2008
  • May 2008
  • April 2008
  • March 2008
  • February 2008
  • January 2008
  • December 2007
  • November 2007
  • September 2007
  • August 2007
  • July 2007
  • April 2007
  • January 2007
  • December 2006
  • October 2006
  • September 2006
  • May 2006

Categories

  • ಇ-ಹೊತ್ತು ಅಂಕಣ
  • ಒಂಟಿದನಿ (ಉದಯವಾಣಿ ಅಂಕಣ)
  • ಟಿಪ್ಪಣಿ
  • ಪ್ರಜಾವಾಣಿ
  • ಬಿಡಿ ಬರಹಗಳು
© 2021 Freedom of the present | ಈ ನಡುವಿನ ಬಿಡುವು | Powered by Minimalist Blog WordPress Theme